Home ಜಿಲ್ಲಾ ಸುದ್ದಿಗಳುವರದಕ್ಷಿಣೆ  ತಿರಸ್ಕರಿಸುವ ಗುಣ ಬೆಳಸಿಕೊಳ್ಳಬೇಕು.: ಮುಪ್ಪಿನ ಬಸವಲಿಂಗ ಶ್ರೀ 

ವರದಕ್ಷಿಣೆ  ತಿರಸ್ಕರಿಸುವ ಗುಣ ಬೆಳಸಿಕೊಳ್ಳಬೇಕು.: ಮುಪ್ಪಿನ ಬಸವಲಿಂಗ ಶ್ರೀ 

by Editor
0 comments
 ನರೆಗಲ್ಲ ವಾರ್ತೆ : ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ಅಡಿಪಾಯ ಹಾಕುತ್ತದೆ ಹಾಗು ಮದುವೆ ಸಮಯದಲ್ಲಿ  ವರದಕ್ಷಿಣೆ  ತಿರಸ್ಕರಿಸುವ ಗುಣ ಬೆಳಸಿಕೊಳ್ಳಬೇಕು ಎಂದು ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು  ಹೇಳಿದರು.
ಅವರು ಸಮೀಪದ ಅಬ್ಬಿಗೇರಿ ಗ್ರಾಮದ ಅನ್ನದಾನಿಶ್ವರ ಶಾಖಾಮಠದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.
ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು ಆಶಿರ್ವಚನ ನೀಡಿ, ಬಡವರ ಪಾಲಿನ ವರದಾನವಾಗಿರುವ ಸಾಮೂಹಿಕ ವಿವಾಹ ಪರಂಪರೆ ಇಂದಿನಿದಲ್ಲ, ಅದು ಬಸವಾದಿ ಶರಣರು ಹಾಕಿಕೊಟ್ಟ ಸನ್ಮಾರ್ಗ ಎಂದರು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಶೀರ್ವಾದವಾಗಿದ್ದು, ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡಿ, ಸರಳ ಹಾಗೂ ಸಾರ್ಥಕವಾಗಿ ವಿವಾಹವನ್ನು ನೆರವೇರಿಸಲು ನೆರವಾಗುತ್ತದೆ. ಇದು ನಮ್ಮ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ — ಮದುವೆ ಎಂದರೆ ವೈಭವವಲ್ಲ, ಜೀವನದ ಪವಿತ್ರ ಬಾಂಧವ್ಯ. ವರದಕ್ಷಿಣೆ ಸಾಮಾಜಿಕ ಪಿಡುಗು ಆಗಿದ್ದು, ಅದನ್ನ ಪಡೆಯುವುದು ಬಿಟ್ಟು, ತಿರಸ್ಕರಿಸುವ ಗುಣ ಬೆಳಸೊಕೊಳ್ಳಿ ಎಂದು ಹೇಳಿದರು
ರೋಣ ತಾಲೂಕು ಗ್ಯಾರಂಟಿ ಸಮೀತಿ ಅಧ್ಯಕ ಮಿಥುನ್ ಪಾಟೀಲ ಮಾತನಾಡಿ
‘ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.
ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳು ಎನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲಾರೂ ಸತ್ಕಾರ ಮಾಡಬೇಕು. ಇಂತಹ ಸಾಮಾಜಿಕ ಕಳಕಳಿಯೊಂದಿಗೆ ಸಮಿತಿಯವರು ನಡೆಸುವ ಸಾಮೂಹಿಕ ವಿವಾಹ ಮಹೋತ್ಸವಗಳು ನಿಜಕ್ಕೂ ಶ್ಲಾಘನೀಯ’ ಎಂದು ಹೇಳಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ ಮಾತನಾಡಿ,ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕರ‍್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
ಸಾಮೂಹಿಕ ವಿವಾಹ ಬಡವರ ಮದುವೆ ಎಂದು ಭಾವಿಸುವುದು ತಪ್ಪು. ಸಹಸ್ರಾರು ಜನರ,ಭಕ್ತರ, ಮಠಾಧೀಶರ ಆಶಿರ್ವಾದದೊಂದಿಗೆ ಬಂಧನಕ್ಕೊಳಗಾಗುವ ಭಾಗ್ಯ. ಜೀವನದ ಸಂಭ್ರಮದ ಕ್ಷಣವಾಗಿದೆ ಎಂದು ಹೇಳಿದರು.
 ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗುಲಗಂಜಿಮಠದ ಗುರುಪಾದ ಮಹಾಸ್ವಾಮಿಗಳು ಮಾತನಾಡಿದರು.
ವೇದಿಕೆಯಲ್ಲಿ ನಿಡಗುಂದಿಕೊಪ್ಪದ ಚನ್ನಬಸವ ಮಹಾಸ್ವಾಮಿಗಳು, ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯರು, ಬನವಾಸಿಯ ಶಿವಲಿಂಗ ಮಹಾಸ್ವಾಮಿಗಳು ಸೇರಿದಂತೆ ಅನೇಕರು ಇದ್ದರು
ತಾಲೂಕು ಮಹರ್ಷಿ ವಾಲ್ಮೀಕಿ ಕಾರ್ಯಕ್ರಮವನ್ನು ಸಮಾಜದ ಅಧ್ಯಕ್ಷ ಬಸವರಾಜ ತಳವಾರ ನಿರೂಪಿಸಿ, ವಂದಿಸಿದರು

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು