Home ಕರ್ನಾಟಕಸೂಡಿಯಲ್ಲಿ ಧರ್ಮ ಸಮ್ಮೇಳನ, ಅಡ್ಡಪಲ್ಲಕ್ಕಿ ಮಹೋತ್ಸವ ಕೃಷಿ ವಲಯದ ಬಿಕ್ಕಟ್ಟಿಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕಿದೆ:ಸಂಸದ ಬಸವರಾಜ ಬೊಮ್ಮಾಯಿ ಪ್ರತಿಪಾದನೆ :

ಸೂಡಿಯಲ್ಲಿ ಧರ್ಮ ಸಮ್ಮೇಳನ, ಅಡ್ಡಪಲ್ಲಕ್ಕಿ ಮಹೋತ್ಸವ ಕೃಷಿ ವಲಯದ ಬಿಕ್ಕಟ್ಟಿಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕಿದೆ:ಸಂಸದ ಬಸವರಾಜ ಬೊಮ್ಮಾಯಿ ಪ್ರತಿಪಾದನೆ :

by Editor
0 comments

ಚೈತನ್ಯ ನ್ಯೂಸ್ 24  ಗದಗ ಮೇ.10:

ವೇಶದಲ್ಲಿ ಕೃಷಿ ಬೆಳೆದಿದೆ. ಆದರೆ, ರೈತನ ಸ್ಥಿತಿ ಸುಧಾರಿಸಿಲ್ಲ. ಕೃಷಿಯಲ್ಲಿ ಬಂಡವಾಳ ಹೂಡಿಕೆ ಕಡಿಮೆಯಾಗಿದೆ. ಒಂದು ಕಾಲದಲ್ಲಿ ಕೃಷಿಯಿಂದ ಶೇ 60ಕ್ಕಿಂತ ಹೆಚ್ಚು ಜಿಡಿಪಿ ಇತ್ತು. ಆದರೆ, ಕೃಷಿಯಿಂದ ಜಿಡಿಪಿ ಕಡಿಮೆಯಾಗಿದೆ. ಕೃಷಿ ವಲಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಚರ್ಚೆ ನಡೆಸುವುದು * ಅಗತ್ಯವಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಸೂಡಿ ಗ್ರಾಮದಲ್ಲಿ ವೀರಶೈವ ಧರ್ಮಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ 50ನೇ ವರ್ಷದ ರಥೋತ್ಸವದ ನಿಮಿತ್ತ ನೂತನ ರದ ಲೋಕಾರ್ಪಣೆ ಹಾಗೂ ಧರ್ಮ ಸಮಾರಂಭದಲ್ಲಿ ಗುರುವಾರ ಭಾಗವಹಿಸಿ ಅವರು ಮಾತನಾಡಿದರು. ರೇಣುಕಾಚಾರ್ಯರು ಮಾನವಧರ್ಮಕ್ಕೆ ಜಯವಾಗಲಿ ಎಂದು ಹೇಳಿದರು. ನಾವೆಲ್ಲರೂ ಮನುಷ್ಯರಾಗಿ ಹುಟ್ಟಿ ಮನುಷ್ಯರಾಗಿಯೇ ಹೋಗುತ್ತೇವೆ. ಆದರೆ, ಕೆಲವರು ಮನುಷ್ಯರಾಗಿ ಹುಟ್ಟಿ ಮಾನವರಾಗಿ ದೇವ ಮಾನವರಾಗುತ್ತಾರೆ. ಮನುಷ್ಯ ಮತ್ತು ಮಾನವರ ನಡುವೆ ಇರುವ ವ್ಯತ್ಯಾಸ ಇಷ್ಟೆ. ಕಾಮ, ಕ್ರೋಧ, ಮೋಹ, ಮದ, ಮತ್ಸರದ ಸಂಕೋಲೆಯಲ್ಲಿ ಸಿಲುಕಿರುವವನು ಮನುಷ್ಯ, ನ್ಯಾಯ, ನೀತಿ, ಧರ್ಮ, ಪ್ರೀತಿ, ಕರುಣಿಯಲ್ಲಿ ಸಿಲುಕಿರುವವನು ಮಾನವ ಮಾನವೀಯ ಗುಣಗಳು ಎಂದರೆ ಏನು ಅಂತಃಕರಣ ಇರುವಂತಹ ಬದುಕನ್ನು ನಡೆಸುವುದು. ಅಂತಃಕರಣದಿಂದ ಜೀವನ ನಡೆಸಿದರೆ ನಮ್ಮ ಬದುಕಿನ ಪಯಣ ಮನುಷ್ಯನಿಂದ ಮಾನವೀಯತೆಯ ಕಡೆಗೆ ಹೋಗುತ್ತದೆ ಎಂದು ಹೇಳಿದರು. ಅಂತಃಕರಣ ಮಾಯಾ ಜಗತ್ತು ಮಾನವೀಯತೆ ಕಳೆದುಕೊಂಡಿದೆ. ಪ್ರತಿ ದಿನ ಯುದ್ಧ ನಡೆಯುತ್ತಿದೆ. ಯುದ್ಧ ಹಿಂದೆ ನ್ಯಾಯಕ್ಕಾಗಿ, ಧರ್ಮಕ್ಕಾಗಿ ನಡೆಯುತ್ತಿತ್ತು. ಸತ್ಯದ ಸ್ಥಾಪನೆಗಾಗಿ ಯುದ್ಧ ನಡೆಯುತ್ತಿತ್ತು. ಈಗ ಯಾರು? ಯಾಕೆ? ಯುದ್ಧ ಮಾಡುತ್ತಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಇದು ಸರಿಯಲ್ಲ ಎಂದು ಹೇಳುವ ಶಕ್ತಿ ಯಾರಿಗೂ ಇಲ್ಲ. ಹೀಗಾಗಿ ಜಗತ್ತಿನಲ್ಲಿ ಮಾನವೀಯತೆ ಸಂಪೂರ್ಣ ಮಾಯವಾಗಿದೆ. ರೈತರು ಬೆಳೆದ ಬೆಳೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ನಿಗದಿ ಮಾಡುತ್ತದೆ ರೈತನಿಗೆ ಆರ್ಥಿಕತೆಯ ಹಿಡಿತ ಸಿಗುತ್ತಿಲ್ಲ. ಎಷ್ಟು ಬಂಡವಾಳ ಹೂಡಬೇಕು. ಎಷ್ಟು ಲಾಭ ಬರುತ್ತದೆ ಎನ್ನುವ ಲೆಕ್ಕ ಸಿಗುತ್ತಿಲ್ಲ ಎಂದು ಹೇಳಿದರು. ರೈತ ಅಭಿವೃದ್ಧಿಯಾಗಿಲ್ಲ: ಈಗ 140 ಕೋಟಿ ಜನಸಂಖ್ಯೆ ಆಗಿದೆ. ಎಲ್ಲರಿಗೂ ಆಹಾರ ಸಿಗುತ್ತಿದೆ. ಅದಕ್ಕೆ ನಮ್ಮ ರೈತ ಕಾರಣ ಈಗಲೂ ಕೃಷಿ ವಲಯದಲ್ಲಿ ಶೇ 65 ರಷ್ಟು ಉದ್ಯೋಗ ಸೃಷ್ಟಿಯಾಗುತ್ತಿದೆ. ಆದರೆ, ಜಿಡಿಪಿ ಕಡಿಮೆಯಾಗಿದೆ ಕೃಷಿಯಲ್ಲಿ ಶೇ 1ರಷ್ಟು ಅಭಿವೃದ್ಧಿಯಾದರೆ ಶೇ. 4ರಷ್ಟು ಉತ್ಪಾದನಾ ವಲಯದ ಅಭಿವೃದ್ಧಿಯಾಗುತ್ತದೆ. ಶೇ. 10ರಷ್ಟು ಸೇವಾ ವಲಯದ ಅಭಿವೃದ್ಧಿಯಾಗುತ್ತದೆ ಕೃಷಿ ಅಭಿವೃದ್ಧಿಯ ಕುರಿತು ಉತ್ತಮ ಚರ್ಚೆಗಳು ನಡೆದು ಅದರ ಸಮಪಯೋಗ ಆಗಲಿ ಎಂದರು. ಶ್ರೀ ಡಾ. ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ ವೀರೇಶ್ವರ ಮಹಾಸ್ವಾಮೀಜಿ, ಶ್ರೀ ಶಿವಸಿದ್ದರಾಮೇಶ್ವರ ಮಹಾಸ್ವಾಮೀಜಿ, ಶ್ರೀ ಕರಿಬಸವ ಮಹಾಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಡಾ. ಭೀಮೇಶ್ವರ ಜೋಶಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಜಿ.ಎಸ್. ಪಾಟೀಲ್, ಮಾಜಿ ಶಾಸಕ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ರೋಣ ಮಂಡಳದ ಅಧ್ಯಕ್ಷ ಉಮೇಶ ಮಲ್ಲಾಪುರ ಪ್ರಮುಖರು ಉಪಸ್ಥಿತರಿದ್ದರು.

ಜಾಗತೀಕರಣ, ಖಾಸಗೀಕರಣ, ಉದಾರೀಕರಣದ ಭರದಲ್ಲಿ ನಮ್ಮೊಳಗಿನ ಅಂತಃಕರಣ ಕಳೆದುಹೋಗಿದೆ. ಪರೋಪಕಾರಿ ಭಾವನೆ ಅಂತರಾಳದಿಂದ ಬರುತ್ತದೆ. ಅದು ಆಧ್ಯಾತ್ಮದಿಂದ ಬರುತ್ತದೆ. ಕೃಷಿಯ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ವಿಚಾರದ ಬಗ್ಗೆ ಬಹಳ ಚರ್ಚೆಗಳು ನಡೆಯಬೇಕು, ಅಂದಾಗ ಕೃಷಿ ಕ್ಷೇತ್ರ ಬೆಳೆಯುತ್ತದೆ. ಇಲ್ಲದಿದ್ದರೆ ಜಗತ್ತು ವೇಗವಾಗಿ ಬೆಳೆಯುತ್ತದೆ. ಇನ್ನೊಂದು ಕಡೆ ರೈತ ಅದರಿಂದ ದೂರವೇ ಉಳಿಯುತ್ತಾನೆ. | ಬಸವರಾಜ ಬೊಮ್ಮಾಯಿ ಸಂಸದ

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು