Home ಕರ್ನಾಟಕಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು

ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು

by Editor
0 comments

ಚೈತನ್ಯ ನ್ಯೂಸ್‌ 24 ಶಿವಮೊಗ್ಗ ಜೂ.10:

ಮನುಷ್ಯ ಜೀವನ ಪವಿತ್ರ ಪಾವನ. ಅರಿತು ಬಾಳುವುದರಲ್ಲಿ ಸುಖ ಶಾಂತಿಯಿದೆ. ಬದುಕಿನ ಉತ್ಕರ್ಷತೆ ಮತ್ತು ಶ್ರೇಯಸ್ಸಿದೆ. ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಬುಧವಾರ ತಾಲೂಕಿನ ಸೂಗೂರು ಶ್ರೀ ಮೃಡಬಸವೇಶ್ವರಸ್ವಾಮಿ ದೇವಸ್ಥಾನದ ಮಂಡಲ ಪೂಜಾ ನಿಮಿತ್ಯವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಜೀವನ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಬೇರೆಯವರಿಗೆ ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ಮನುಷ್ಯ ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾನೆ. ಆದರೆ ದೊಡ್ಡ ಮನುಷ್ಯನಾಗಿ ಬಾಳಲು ಯತ್ನಿಸುತ್ತಿಲ್ಲ. ಸಂಪತ್ತು ಬಂದಾಗ ಸ್ನೇಹ ಹೆಂಡತಿ ಬಂದಾಗ ಹೆತ್ತವರನ್ನು ಮರೆಯಬಾರದು. ಸಮಾಜದಲ್ಲಿ ಗೌರವ ಘನತೆ ಪ್ರಾಪ್ತವಾದ ದಿನಗಳಲ್ಲಿ ನಡೆದು ಬಂದ ದಾರಿಯನ್ನು ಮರೆಯಬಾರದು. ವೀರಶೈವ ಧರ್ಮದಲ್ಲಿ ಸಂಸ್ಕಾರ ಸಂಸ್ಕೃತಿಗೆ ಬಹಳಷ್ಟು ಮಹತ್ವವನ್ನು ಕೊಟ್ಟಿದ್ದಾರೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವ ಬಂಧುತ್ವದ ವಿಚಾರ ಧಾರೆಗಳು ಸಕಲರಿಗೂ ದಾರಿದೀಪ. ಸೂಗೂರಿನಲ್ಲಿ ಭವ್ಯ ಸುಂದರ ಶ್ರೀ ಮೃಡಬಸವೇಶ್ವರಸ್ವಾಮಿ ದೇವಸ್ಥಾನ ನಿರ್ಮಿಸಿ ಇಂದು ಮಂಡಲೋತ್ಸವ ಆಚರಿಸುತ್ತಿರುವುದು ತಮ್ಮೆಲ್ಲರಲ್ಲಿರುವ ಧರ್ಮ ನಿಷ್ಠೆಗೆ ಈ ಸಮಾರಂಭ ಸಾಕ್ಷಿಯಾಗಿದೆ ಎಂದು ಹರುಷ ವ್ಯಕ್ತಪಡಿಸಿದರು.


ನೇತೃತ್ವ ವಹಿಸಿದ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಗ್ರಾಮಸ್ಥರ ಬಹಳ ವರುಷಗಳ ಸಂಕಲ್ಪ ಇಂದು ಸಾಕಾರಗೊಂಡ ಸುದಿನ. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಧರ್ಮ ಪ್ರಜ್ಞೆ ಮತ್ತು ರಾಷ್ಟç ಪ್ರಜ್ಞೆ ಬೆಳೆದು ಬರಬೇಕೆಂದರು. ನೇತೃತ್ವ ವಹಿಸಿದ ಮಳಲಿ ಮಠದ ಡಾ||ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶಿವ ಎಂಬ ಶಬ್ದ ಭವಾಬ್ಧಿ ದಾಟಿಸುವ ಹರಿಗೋಲು. ಗುರುವಿನ ಮೂಲಕ ಅರಿವು ಪಡೆದು ಮಾನವ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣಕುಮಾರ್ ಮಾತನಾಡಿ ಮನುಷ್ಯನಲ್ಲಿ ಏನೆಲ್ಲ ಸಂಪತ್ತು ಇದ್ದರೂ ಮಾನಸಿಕವಾಗಿ ಶಾಂತಿಯಿಲ್ಲ. ಸಮೃದ್ಧ ಶಾಂತಿಯ ಬದುಕಿಗೆ ಧರ್ಮವೊಂದೇ ಆಶಾಕಿರಣವೆಂದರು. ಮಾಜಿ ಸಂಸದ ಆಯನೂರು ಮಂಜುನಾಥ ಮಾತನಾಡಿ ಆಧುನಿಕ ಕಾಲದಲ್ಲಿ ನಾವಿದ್ದರೂ ನಮ್ಮ ಆದರ್ಶ ಪರಂಪರೆ ಸಂಸ್ಕೃತಿ ಮರೆಯಬಾರದು. ವೀರಶೈವ ಧರ್ಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಮತ್ತು ಜಗಜ್ಯೋತಿ ಬಸವಣ್ಣನವರು ಆಧ್ಯಾತ್ಮದ ಅರಿವನ್ನು ಬೋಧಿಸಿ ಉದ್ಧರಿಸಿದ್ದನ್ನು ಯಾರೂ ಮರೆಯಬಾರದೆಂದರು. ಶಿವಮೊಗ್ಗ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ ಆಧ್ಯಾತ್ಮ ಜ್ಞಾನ ನಮ್ಮೆಲ್ಲರಿಗೆ ಸಂಜೀವಿನಿಯಾಗಿದೆ. ಸ್ವಾರ್ಥಕ್ಕಾಗಿ ಆದರ್ಶ ಮೌಲ್ಯಗಳನ್ನು ಯಾರೂ ಮರೆಯಬಾರದೆಂದರು. ಪ್ರೊ. ಹಾ.ಮಾ.ನಾಗರಾಜ್ ಅವರು ವೀರಶೈವ ಧರ್ಮದ ತತ್ವತ್ರಯಗಳನ್ನು ಮರೆಯದೇ ಪರಿಪಾಲಿಸಿಕೊಂಡು ಬರಬೇಕೆಂದರು. ಕಲ್ಪನಾ ಇವರಿಂದ ಪ್ರಾರ್ಥನೆ ಜರುಗಿತು. ಶಿವಕುಮಾರ್ ಸರ್ವರನ್ನೂ ಸ್ವಾಗತಿಸಿದರು. ನವೀನ ನಿರೂಪಿಸಿದರು.


ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ವೈಭವ ಕಳಸ ಕನ್ನಡಿಯೊಂದಿಗೆ ಸಂಭ್ರಮದಿAದ ಜರುಗಿತು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು.

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು