Home Uncategorizedನಾಳೆಯಿಂದ ಕೊತಬಾಳ ಅಡವಿ ಸಿದ್ದೇಶ್ವರರ ಪುಣ್ಯಸ್ಮರಣೆ

ನಾಳೆಯಿಂದ ಕೊತಬಾಳ ಅಡವಿ ಸಿದ್ದೇಶ್ವರರ ಪುಣ್ಯಸ್ಮರಣೆ

by Editor
0 comments

ಚೈತನ್ಯ ನ್ಯೂಸ್ 24 ಕೊತಬಾಳ ಮೇ3:
ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ

ವಿವಾಹಗಳ ಪರಿಕಲ್ಪನೆ ಮೂಡಿಸಿದ ತಾಲೂಕಿನ ಕೊತಬಾಳ ಗ್ರಾಮದ ಅಡವಿ ಸಿದ್ದೇಶ್ವರರ 71ನೇ ಹಾಗೂ ರಾಜಶೇಖರ ಶಿವಯೋಗಿಗಳ 25ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಮೇ 4ರಿಂದ 8ರವರೆಗೆ 50 ಜೋಡಿ ಸಾಮೂಹಿಕ ವಿವಾಹ, ಅಯ್ಯಾಚಾರ, ಅಡ್ಡಪಲ್ಲಕ್ಕಿ ಉತ್ಸವ, ಕುಂಭಮೇಳ, ಸಾಧಕರಿಗೆ ಸನ್ಮಾನ, ಧರ್ಮಸಭೆ, ರಥೋತ್ಸವ ನಡೆಯಲಿದ್ದು, ಧಾರ್ಮಿಕ ಕಾರ್ಯಕ್ರಮಗಳ ಸಿದ್ದತೆ ಬರದಿಂದ ಸಾಗಿದೆ.

ಮೇ 4ರಂದು ಮಧ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹಗಳ ನಡೆಯಲಿದ್ದು, ಪತ್ರಿವನಮಠದ ಸಿದ್ದವೀರ
ಶಿವಾಚಾರ್ಯರು, ಗವಿಮಠದ ಬಸವಲಿಂಗ ಸ್ವಾಮೀಜಿ, ಗುಲಗಂಜಿ ಮಠದ ಗುರುಪಾದ ದೇವರು, ಡಾ| ಕೊಟ್ಟೂರೇಶ್ವರ ಸ್ವಾಮೀಜಿ, ಅರಳೆ ಮಠದ ಸಿದ್ದಲಿಂಗ ಶಿವಾಚಾರ್ಯರು, ನವಗ್ರಹ ಹಿರೇಮಠದ ಶಿವಪೂಜೆ ಶಿವಾಚಾರ್ಯರು, ಸಿದ್ದೇಶ್ವರ ಮಠದ ಗುರುಸಿದ್ದೇಶ್ವರ ಸ್ವಾಮೀಜಿ, ಅಡವಿಸಿದ್ದೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಜಿ.ಎಸ್. ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿರುವರು. ಸಂಜೆ 4ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಗುರುರಕ್ಷೆ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8ಕ್ಕೆ ಜನಪದ ಸಂಜೆ ಕಾರ್ಯಕ್ರಮ ನಡೆಯಲಿದೆ.

You may also like

Leave a Comment

ಕೆಜಿಎಂಎಸ್ ಶಾಲೆಯಲ್ಲಿ ಪ್ರಥಮ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ   ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಎ.ಸಿ. ಪಾಟೀಲ   ಜೂ.14 ರಂದು ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’   ಪ್ರೊ. ಬಿ. ಕೃಷ್ಣಪ್ಪನವರ ಸ್ಮರಣೆಯಲ್ಲಿ ಸೇವಾ ಕಾರ್ಯ ಕೈಗೊಂಡ ಡಿ.ಎಸ್.ಎಸ್.   ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ಶ್ರೀ ರಂಭಾಪುರಿ ಜಗದ್ಗುರುಗಳು