ಚೈತನ್ಯ ನ್ಯೂಸ್ 24 ಲಕ್ಷೇಶ್ವರ ಮೇ.10:
ಪಟ್ಟಣದ ಹಾಲೇವಾಡಿ ಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಮಂದಿರದ ರಚಿತ ಮಹೋತ್ಸವ ಮತ್ತು ಯುಗ ಮಾನೋತ್ಸವ ಕಾರ್ಯಕ್ರಮದ ನಿಮಿತ್ಯವಾಗಿ ಹಾಲೇವಾಡಿ ಮಠದಲ್ಲಿ ಜಗದ್ಗುರು ವೀರ ಸಿಂಹಾ ಸ ನಾ ದೀ ಶ್ವರ’ ರಂಭಾಪುರಿ ಪೀಠದ তো. ವೀರ ಸೋಮೇಶ್ವರ ಜಗದ್ಗುರುಗಳು ಲೋಕ ಕಲ್ಯಾಣಕ್ಕಾಗಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು. ಈ ಸಮಯದಲ್ಲಿ ಅಲೆವಾಡಿ ಮಠದ ವಂಶಸ್ಥರು, ಪಟ್ಟಣದ ಭಕ್ತಾದಿಗಳು ಇಷ್ಟಲಿಂಗ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಿದರು. ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕಲಾ ತಂಡಗಳಿಂದ ಜಗದ್ಗುರು ರೇಣುಕಾಚಾರ್ಯರ ಮತ್ತು ವಿಶ್ವಗುರು ಬಸವಣ್ಣನವರ ಭಾವಚಿತ್ರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿ ಬೀದಿಗಳಲ್ಲಿ ಅದ್ದೂರಿಯಾಗಿ ಜರುಗಿತು. ಯುದ್ದಕ್ಕೂ ವಿವಿಧ ಕಲಾತಂಡಗಳಿಂದ ಮೆರವಣಿಗೆಯು ವಿಜೃಂಭಣೆಯಿಂದ ಸಾಗಿತು. ಅಪಾರಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಮೆರವಣಿಗೆಯು ಸೋಮೇಶ್ವರ ತೇರಿನ ಮನೆ ಆವರಣದ ಮುಂಭಾಗದಲ್ಲಿ ಹಾಕಿರುವ ಭವ್ಯ ವೇದಿಕೆಗೆ ಆಗಮಿಸಿ ಸಂಪನ್ನಗೊಂಡಿತು.