ಚೈತನ್ಯ ನ್ಯೂಸ್ 24 ನವಲಗುಂದ ಮೇ.15:
ನವಲಗುಂದ : ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಆಹಾರ ಧಾನ್ಯಗಳನ್ನು ಪೂರೈಸುತ್ತಿದ್ದು, ಅದರಂತೆ ಮೇ ಮತ್ತು ಜೂನ, ಎರಡು ಮಾಹೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿನ ಅಂತ್ಯೋದಯ ಅನ್ನ ಪಡಿತರ ಚೀಟಿ ಮತ್ತು ಪಿಎಚ್ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ವಿತರಣೆ ಮಾಡಲಾಗುತ್ತಿದೆ. ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯ ಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಮಾಹೆವಾರು ಪ್ರತ್ಯೇಕವಾಗಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರವನ್ನು ಪಡೆಯಬಹುದು ಎಂದು ತಹಶೀಲ್ದಾರ ಸುಧೀರ್ ಸಾಹುಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೋಟೋ : ನವಲಗುಂದ ತಹಶೀಲ್ದಾರ ಸುಧೀರ್ ಸಾಹುಕಾರ್ ಭಾವಚಿತ್ರ