Home ಜಿಲ್ಲಾ ಸುದ್ದಿಗಳುಪ್ರಧಾನಿ ಮೋದಿ ಕರೆಗೆ ಜನರ ಸ್ಪಂದನೆ: 

ಪ್ರಧಾನಿ ಮೋದಿ ಕರೆಗೆ ಜನರ ಸ್ಪಂದನೆ: 

by Editor
0 comments

ಚೈತನ್ಯ ನ್ಯೂಸ್ 24 ಗಜೇಂದ್ರಗಡ: ಮೇ.16:

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತಕ್ಕೆ ಇಂಧನ ಕೊರತೆ ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಜನರು ಸ್ಪಂದಿಸಿದ್ದಾರೆ ಎಂದು ಬಿಜೆಪಿಯ ಯುವ ಮುಖಂಡ ಉಮೇಶ ಚನ್ನು ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸ್ವಂತ ವಾಹನಗಳ ಬಳಕೆ ಕಡಿಮೆ ಮಾಡಿದ್ದಾರೆ. ಮೋದಿ ಅವರು ಹೇಳಿದರೆ ನಾವು ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇವೆ ಎ೦ದು ಜನರೇ ಹೇಳುತ್ತಿದ್ದಾರೆ. ಮೋದಿ ಅವರು ಏನೇ ಹೇಳಿದರೂ ಅದರ ಹಿಂದೆ ನಮ್ಮ ಹಾಗೂ ದೇಶದ ರಕ್ಷಣೆ ಮತ್ತು ಅಭಿವೃದ್ಧಿ, ಗೌರವ, ಆರೋಗ್ಯ ಅಡಗಿರುತ್ತದೆ. ಅದಕ್ಕಾಗಿ ಮೋದಿ ಅವರು ಹೇಳಿದ್ದನ್ನು ಪಾಲಿಸುತ್ತೇವೆ ಎಂದು ಜನರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ದೇಶದ ರಕ್ಷಣೆ, ಜನರ ರಕ್ಷಣೆ, ದೇಶದ ಆರ್ಥಿಕತೆ, ದೇಶದ ಭದ್ರತೆ, ಸ್ವದೇಶಿ ಉತ್ಪನ್ನಗಳ ಬಳಕೆಯ ಹೆಚ್ಚಳ, ಮಿತವ್ಯಯ ಇದರಿಂದ ಸದೃಢ ಭಾರತ ನಿರ್ಮಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ನಾವೆಲ್ಲರೂ ಸ್ಪಂದಿಸೋಣ ಎಂದರು.

You may also like

Leave a Comment

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಸಮೃದ್ಧ : ಶ್ರೀ ರಂಭಾಪುರಿ ಜಗದ್ಗುರುಗಳು   ಅಬ್ಬಿಗೇರಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ: ಬಿಳಿ ಎತ್ತಿನ ಕರಿ ಮುರಿತ – ಬಿಳಿ ಬೆಳೆಗೆ ಶುಭ ಸಂಕೇತ   ಕರಿ ಹರಿದ ಬಿಳಿ ಎತ್ತು: ಊರಿಗೇ ಒಲಿದ ಅದೃಷ್ಟ, ಈ ಬಾರಿ ಬಂಪರ್ ಬೆಳೆ ನಿಶ್ಚಿತ!   ಜೀವನದಲ್ಲಿ ಗುರಿಯಿರಲಿ ಉರಿ ಬೇಡ : ಶ್ರೀ ರಂಭಾಪುರಿ ಜಗದ್ಗುರುಗಳು   ಶ್ರೀ ರಂಭಾಪುರಿ ಜಗದ್ಗುರುಗಳವರ ಜುಲೈ ಮಾಹೆಯ ಪ್ರವಾಸ